ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸರಬರಾಜು ಸ್ಥಗಿತ
ಪುತ್ತೂರು, ಜೂನ್ 16: ಪುತ್ತೂರಿನ 110/33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ಜೂನ್ 18ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಉಪಕೇಂದ್ರದಿಂದ ಹೊರಡುವ ಕಬಕ, ನಗರ ಹಾಗೂ ಬಲ್ನಾಡು (ಕೆದಿಲ) ಫೀಡರ್ಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಇದರ ಪರಿಣಾಮವಾಗಿ ಕಲ್ಲೇಗ, ನಗರ ಜಂಕ್ಷನ್, ಕಬಕ, ಮುರ, ವಿದ್ಯಾಪುರ, ರಕ್ತೇಶ್ವರಿ ವಠಾರ, ಶೇವಿರೆ, ಮಂಜಲ್ಪಡ್ಪು, ಕೆ.ಎಂ. ಸ್ಟೋರ್, ಉರ್ಲಾಂಡಿ, ಬಪ್ಪಳಿಗೆ, ವಿವೇಕಾನಂದ ಕಾಲೇಜು ಸುತ್ತಮುತ್ತಲಿನ ಪ್ರದೇಶ, ಪಡ್ನಾಯೂರು, ಪೆರಿಯತ್ತೋಡಿ, ಗಣೇಶ್ಬಾಗ್, ಸನ್ನಿಧಿ ಲೇಔಟ್, ನವನಗರ, ಕಾರ್ಜಾಲು, ಚನಿಲ ಹಾಗೂ ಕಪ್ಪೆಕೆರೆ ಸೇರಿದಂತೆ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮೆಸ್ಕಾಂ ನಗರ ಉಪವಿಭಾಗದ ಅಧಿಕಾರಿಗಳು ಸಾರ್ವಜನಿಕರು ಮತ್ತು ವಿದ್ಯುತ್ ಬಳಕೆದಾರರು ಈ ತಾತ್ಕಾಲಿಕ ವ್ಯತ್ಯಯವನ್ನು ಗಮನಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ವಿದ್ಯುತ್ ಜಾಲದ ನಿರ್ವಹಣೆ ಮತ್ತು ಸೇವೆಯ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ :
ಶ್ರೀರಾಮಚಂದ್ರರ ಕುರಿತು ವಿವಾದಾತ್ಮಕ ಹೇಳಿಕೆ : ಪ್ರೊ. ಭಗವಾನ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಲು ಅಶೋಕ್ ರೈ ಆಗ್ರಹ
ಪಾಪೆತ್ತಡ್ಕ ಜೀತೊ ಸ್ಕೂಟರ್ ಅಪಘಾತ : ಸವಾರ ಆಸ್ಪತ್ರೆಗೆ ದಾಖಲು
ಪುತ್ತೂರು ಮೆಡಿಕಲ್ ಕಾಲೇಜಿನ ಅಧಿಕೃತ ಲೋಗೋ ನಿಮ್ಮದಾಗಬಹುದೇ? ಸಾರ್ವಜನಿಕರಿಗೆ ಸುವರ್ಣಾವಕಾಶ!
















2 thoughts on “ಪುತ್ತೂರಿನ ಹಲವು ಪ್ರದೇಶಗಳಲ್ಲಿ ಜೂನ್ 18ರಂದು ವಿದ್ಯುತ್ ವ್ಯತ್ಯಯ”