ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಖಾಸಗಿ ಹೋಂಸ್ಟೇಯೊಂದರಲ್ಲಿ ಬೆಂಗಳೂರಿನ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆಕೆಯೊಂದಿಗೆ ಹೋಂಸ್ಟೇಯಲ್ಲಿ ತಂಗಿದ್ದ ಸಂಜೀತ್ ಅಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಸಾಯಿ ಸುರಭಿ ಮತ್ತು ಸಂಜೀತ್ ಅಲಿ ಹೋಂಸ್ಟೇಯಲ್ಲಿ ತಂಗಿದ್ದರು. ನಿಗದಿತ ಸಮಯದ ಬಳಿಕವೂ ಕೊಠಡಿಯಿಂದ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಯುವತಿ ಮೃತ ಸ್ಥಿತಿಯಲ್ಲಿ ಹಾಗೂ ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಮೃತೆಯ ತಾಯಿ ಇದು ಪೂರ್ವನಿಯೋಜಿತ ಕೃತ್ಯವಾಗಿದ್ದು, ‘ಲವ್ ಜಿಹಾದ್’ ಪ್ರಕರಣವೆಂದು ಆರೋಪಿಸಿದ್ದಾರೆ. ಹಾಗೆಯೇ ಸಂಜಿತ್ ಅಲಿ ತನ್ನ ಮಗಳಿಗೆ ಡ್ರಗ್ಸ್ ಚಟವನ್ನು ಹತ್ತಿಸಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಈ ಹಿಂದೆ ಡ್ರಗ್ಸ್ ಚಟವನ್ನು ಬಿಡಲು ಚಿಕಿತ್ಸೆ ಕೊಡಿಸಿದ್ದು ತದನಂತರ ಆರೋಗ್ಯವಾಗಿ ಇದ್ದಳು ಎಂದು ಹೇಳಿದ್ದಾರೆ.
ಇದೇ ವೇಳೆ, ಪ್ರಕರಣದ ಕುರಿತು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ, ವಿಧಿವಿಜ್ಞಾನ ವರದಿ, ಡಿಜಿಟಲ್ ಸಾಕ್ಷ್ಯಗಳು ಹಾಗೂ ಇತರ ಪುರಾವೆಗಳ ಆಧಾರದ ಮೇಲೆ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸದ್ಯ ಕೊಲೆ ಸೇರಿದಂತೆ ಎಲ್ಲಾ ಸಾಧ್ಯತೆಗಳನ್ನೂ ಪರಿಗಣಿಸಿ ತನಿಖೆ ಮುಂದುವರಿದಿದೆ.
ಮತ್ತಷ್ಟು ಓದಿ :
ವಿಟ್ಲದಲ್ಲಿ ಮಟ್ಕಾ ಜೂಜಾಟಕ್ಕೆ ಪೊಲೀಸರ ಬ್ರೇಕ್ : ದಾಳಿಯಲ್ಲಿ ಓರ್ವ ವಶ, ಮೊಬೈಲ್ ಮತ್ತು ನಗದು ಜಪ್ತಿ
ಮಂಗಳೂರು ಕೆಎಸ್ಆರ್ಟಿಸಿ ಬಸ್ ಪ್ರಯಾಣದ ವೇಳೆ ಚಿನ್ನದ ಮಾಂಗಲ್ಯ ಸರ ಕಳವು; ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ












