ಮಾಣಿ, ಜೂನ್ 5 : ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ ಎನ್ನಲಾಗಿದೆ.
ಅಪಘಾತದ ವೇಳೆ ಕಾರು ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.














1 thought on “ಮಂಗಳೂರು-ಉಪ್ಪಿನಂಗಡಿ ಹೆದ್ದಾರಿಯಲ್ಲಿ ಅವಘಡ: ಚರಂಡಿಗೆ ಬಿದ್ದ ಕಾರು, ದಂಪತಿ ಸುರಕ್ಷಿತ”