ವಿಶೇಷ ಪೂಜೆಗಾಗಿ ಆಗಮಿಸಲಿರುವ ಮುಖ್ಯಮಂತ್ರಿ; ಪೊಲೀಸ್ ಹಾಗೂ ಅರಣ್ಯ ಇಲಾಖೆ ಎಚ್ಚರಿಕೆ ಕ್ರಮ
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಲಭ್ಯವಿರುವ ಮಾಹಿತಿಯಂತೆ, ಮುಖ್ಯಮಂತ್ರಿ ವಿಜಯ್ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ತೆರಳಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ದೇವಸ್ಥಾನದ ಪೂಜೆ ಹಾಗೂ ದರ್ಶನ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಅವರು ಮಂಗಳೂರಿಗೆ ಮರಳಲಿದ್ದು, ನಂತರ ಚೆನ್ನೈಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗೆ Z+ ಭದ್ರತಾ ವ್ಯವಸ್ಥೆ ಇರುವ ಹಿನ್ನೆಲೆ ಅವರ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.














1 thought on “ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ”